ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಗನ ಸಾವಿನ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಗನ ಉತ್ತರ ಕ್ರಿಯೆ ನಡೆದು ಎರಡು ದಿನದಲ್ಲಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.
04:14 PM Jan 16, 2024 IST | Ramya Bolantoor

ಬೆಳ್ತಂಗಡಿ: ಮಗನ ಉತ್ತರ ಕ್ರಿಯೆ ನಡೆದು ಎರಡು ದಿನದಲ್ಲಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ಆತ್ಮಹತ್ಯೆ ಮಾಡಿಕೊಂಡುವರು ಎಂದು ತಿಳಿದು ಬಂದಿದೆ.

Advertisement

ಜ. 4ರಂದು 8ನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದ.ಮಗನ ಉತ್ತರಕ್ರಿಯೆ ಜ. 14ರಂದು ಭಾನುವಾರ ನಡೆದಿತ್ತು. ಯೋಗೇಶ್ ಪೂಜಾರಿ ಮತ್ತು ರೇಷ್ಮೆ ದಂಪತಿಯ ಪುತ್ರ ಯಕ್ಷಿತ್ ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.

ಆರು ವರ್ಷದ ತಮ್ಮನ ಜೊತೆ ಪದೇಪದೇ ಗಲಾಟೆ ನಡೆಯುತ್ತಿತ್ತು. ಆದರೆ ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆಯ ಮೇಲೆ ಕಚ್ಚಿ ಗಾಯ ಮಾಡಿದ್ದು, ಈ ವಿಚಾರಕ್ಕೆ ನೊಂದ ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿದ್ದ. ‌ ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಕಲಿಯುತಿದ್ದ. ತಂದೆ ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ತಾಯಿಯ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿದ್ದರು.

Advertisement

Advertisement
Tags :
LatestNewsNewsKannadaಬೆಳ್ತಂಗಡಿಮಂಗಳೂರು
Advertisement
Next Article