ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
08:16 PM Apr 27, 2024 IST
|
Chaitra Kulal
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
Advertisement
ಟೀ, ಸಿಗರೇಟ್ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯಗೊಳಿಸಿದ್ದಾರೆ.
ಟೀ ಶಾಪ್ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.
Advertisement
ಗಲಾಟೆಯಲ್ಲಿ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
Advertisement
Next Article