ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್ ದಾಖಲಿಸಿದ ಘಟನೆ ನಡೆದಿದೆ. 
11:52 AM May 18, 2024 IST | Ashika S

ಬೆಂಗಳೂರು: ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್ ದಾಖಲಿಸಿದ ಘಟನೆ ನಡೆದಿದೆ.

Advertisement

ಕೆಆರ್ ಪುರಂ ವ್ಯಾಪ್ತಿಯಲ್ಲಿರುವ ಬಸವನಪುರ ವಾರ್ಡ್‌ನಲ್ಲಿರುವ ಸಾಯಿ ಸೆರಿನಿಟಿ ಲೇಔಟ್‌ನಲ್ಲಿ ಮರಗಳನ್ನು ಕಡಿಯುತ್ತಿದ್ದ ವೇಳೆ ಬಡಾವಣೆಯ ನಿವಾಸಿಯೊಬ್ಬರು ಮಧ್ಯಪ್ರವೇಶಿಸಲು ಮುಂದಾದಾಗ ಬೆದರಿಕೆ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮಹದೇವಪುರ ವಲಯ ಉಪ ವಲಯ ಅರಣ್ಯಾಧಿಕಾರಿ ಸುದರ್ಶನರೆಡ್ಡಿ ಅವರಿಗೆ ಕರೆ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತಡವಾಗಿ ಸ್ಥಳಕ್ಕೆ ತಲುಪಿದ್ದಾರೆ. ನಂತರ ಮರ ಕತ್ತರಿಸುವುದನ್ನು ನಿಲ್ಲಿಸಲಾಯಿತು. ಅಧಿಕಾರಿಗಳು ಹೊರಟ ನಂತರ ಮತ್ತೆ ಕೆಲಸ ಆರಂಭಿಸಿದ್ದಾರೆ.

Advertisement

1976ರ ಮರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ರಾಜೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕ್ರಮ ಕೈಗೊಂಡಿರುವ ವರದಿಯನ್ನು ವಿಶೇಷ ಆಯುಕ್ತರು, ಕೆರೆಗಳು, ಉದ್ಯಾನವನಗಳು ಮತ್ತು ಬಿಬಿಎಂಪಿ ಅರಣ್ಯ ವಿಭಾಗಕ್ಕೆ ಕಳುಹಿಸಲಾಗಿದೆ ಎಂದು ಮಹದೇವಪುರದ ರೇಂಜ್ ಫಾರೆಸ್ಟ್ ಆಫೀಸರ್ ಪುಷ್ಪಾ ಎಂ ತಿಳಿಸಿದ್ದಾರೆ.

Advertisement
Tags :
builderFIRLatetsNewsNewsKarnatakatreesಎಫ್‌ಐಆರ್‌
Advertisement
Next Article