ಸದಾನಂದಗೌಡರ ಕೈತಪ್ಪಿದ ಟಿಕೆಟ್; ಕಾಲ್ ಮಾಡಿ ಶಾಕ್ ಕೊಟ್ಟ ಅಮಿತ್ ಶಾ
ಮಾಜಿ ಸಿಎಂ ಡಿ.ವಿ ಸದಾನಂದಗೌಡರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದಾಗಿ ಕರೆ ಮಾಡಿ ಅಭ್ಯರ್ಥಿ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
06:58 PM Mar 13, 2024 IST
|
Maithri S
ಬೆಂಗಳೂರು: ಮಾಜಿ ಸಿಎಂ ಡಿ.ವಿ ಸದಾನಂದಗೌಡರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದಾಗಿ ಕರೆ ಮಾಡಿ ಅಭ್ಯರ್ಥಿ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
ಈ ಮೊದಲು ಎರಡು ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಗೌಡರಿಗೆ ಟಿಕೆಟ್ ತಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.
ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯನಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿದ ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಿದ ಅವರು ಶಕ್ತಿಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಈ ಬೆಳವಣಿಗೆಯಿಂದಾಗಿ ಸದಾನಂದಗೌಡರು ತಮ್ಮ ಕ್ಷೇತ್ರವನ್ನು ಶೋಭಾ ಕರಂದ್ಲಾಜೆಗೆ ಬಿಟ್ಟುಕೊಡಬೇಕಾಗುತ್ತದೆ ಎನ್ನಲಾಗಿದ್ದು, ಅವರು ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ಬಗ್ಗೆಯೂ ಚರ್ಚೆಗಳಾಗುತ್ತಿವೆ.
Advertisement
Next Article