ಸಿಕ್ಕಿಂನಲ್ಲಿ ಗದಗ ಮೂಲದ ಕರ್ತವ್ಯನಿರತ ಯೋಧ ಹುತಾತ್ಮ
ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ.
08:02 AM Feb 06, 2024 IST
|
Ashitha S
ಗದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ.
Advertisement
ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತ ಆಗಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಫೆ.7ರಂದು ಹುತಾತ್ಮ ಯೋಧನ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂದು ತಿಳಿದುಬಂದಿದೆ.
Advertisement
Advertisement
Next Article