For the best experience, open
https://m.newskannada.com
on your mobile browser.
Advertisement

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
11:16 AM May 19, 2024 IST | Chaitra Kulal
ಗೀತಾಂಜಲಿ ಸಿಲ್ಕ್  ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿ: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

Advertisement

ಮೃತರು ಐವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5 ಗಂಟೆಗೆ ಕಾರ್ಕಳ ನೀರೆಬೈಲೂರಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ಸಂಸ್ಥಾಪಕರ ನಿಧನ ಹಿನ್ನೆಲೆಯಲ್ಲಿ ಉಡುಪಿಯ ಗೀತಾಂಜಲಿ ಸಿಲ್ಕ್, ನ್ಯೂ ಶಾಂತಿ ಸಾಗರ್ ರೆಸ್ಟೋರೆಂಟ್, ಶಾಂತಿ ಸಾಗರ್, ಮಣಿಪಾಲದ ಶ್ರೀಶಾಂತಿ ಸಾಗರ್ ಹೊಟೇಲ್‌ಗಳಿಗೆ ರಜೆ ನೀಡಲಾಗಿದೆ.

Advertisement

Advertisement
Tags :
Advertisement