ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ, ಸಂಸದ ಡಾ.ಉಮೇಶ್ ಜಾಧವ್ ಬೆಂಬಲಿಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
10:42 AM Mar 01, 2024 IST | Gayathri SG
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ, ಸಂಸದ ಡಾ.ಉಮೇಶ್ ಜಾಧವ್ ಬೆಂಬಲಿಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
Advertisement
ಮೃತರನ್ನು ಗಿರೀಶ್ ಚಕ್ರ ಎಂದು ಗುರುತಿಸಲಾಗಿದ್ದು, ಈತ ಬಿಜೆಪಿ ಮುಖಂಡನಾಗಿದ್ದಾನೆ. ಗಿರೀಶ್ ನನ್ನು ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿಎಸ್ಎನ್ಎಲ್ ಸಲಹಾ ಸಮಿತಿಗೆ ನಿರ್ದೇಶಕರನ್ನಾಗಿ ಸಂಸದ ಡಾ.ಉಮೇಶ್ ಜಾಧವ್ ಆಯ್ಕೆ ಮಾಡಿದ್ದರು.
ಈ ಹಿನ್ನಲೆಯಲ್ಲಿ ಪಾರ್ಟಿ ಕೊಡುವುದ್ದಾಗಿ ಸ್ನೇಹಿತರೇ ಜಮೀನಿಗೆ ಕರಿಸಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಲಾಗಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ.
Advertisement
Advertisement