ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದು ಬಾಲಕಿಗೆ ಮಲತಾಯಿಯ ಚಿತ್ರಹಿಂಸೆ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬಾಲಕಿಗೆ ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಲತಾಯಿಯೊಬ್ಬಳು ಚಿತ್ರಹಿಂಸೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
12:18 PM Feb 25, 2024 IST | Gayathri SG

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬಾಲಕಿಗೆ ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಲತಾಯಿಯೊಬ್ಬಳು ಚಿತ್ರಹಿಂಸೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಪವಿತ್ರಾ ಮತ್ತು ಶ್ರೀನಿವಾಸ್​ ದಂಪತಿಯ ಈ ಹೆಣ್ಣು ಮಗಳು ಹುಟ್ಟಿದ್ದು, ಐದು ವರ್ಷಗಳ ಹಿಂದೆ ಪವಿತಾಳಿಗೆ ಶ್ರೀನಿವಾಸ್ ವಿಚ್ಛೇದನವನ್ನೂ ನೀಡಿದ್ದರು. ಬಳಿಕ ಮಮತಾ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ನಾಲ್ಕನೇ ತರಗತಿ ಓದುತ್ತಿರುವ ಈ ಬಾಲಕಿಗೆ ಮಮತಾ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾಳೆ. ಬಾಲಕಿ ತುಂಬ ಹಠ ಮಾಡುತ್ತಾಳೆ ಎಂದು ಗಂಡನಿಗೆ ದೂರು ನೀಡುವ ಆಕೆ, ಕಬ್ಬಿಣ ಕಾಯಿಸಿ ಬಾಲಕಿ ಮೈಮೇಲೆ ಬರೆ ಎಳೆದು ಅಮಾನವೀಯವಾಗಿ ವರ್ತಿಸುತ್ತಿದ್ದಾಳೆ.

ಮಲತಾಯಿಯ ಚಿತ್ರಹಿಂಸೆ ತಾಳಲಾರದೆ ಮಾತನಾಡಿದ ಬಾಲಕಿ, ನನ್ನ ಮೇಲೆ ತಾಯಿ ಯಾಕೆ ಹಲ್ಲೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಾಯಿ ತಂದೆಗೆ ಸುಳ್ಳು ಹೇಳುತ್ತಿದ್ದಾಳೆ. ಅಜ್ಜಿ ಮನೆಯಲ್ಲಿ ಇದ್ದಾಗಲೂ ಗಲಾಟೆ ಮಾಡಿ ಕಡೆದುಕೊಂಡು ಬರಲು ತಾಯಿ ಹೇಳಿದ್ದಳು ಎಂದು ಮಲತಾಯಿಯ ಕ್ರೌರ್ಯದ ಬಗ್ಗೆ ತಿಳಿಸಿದ್ದಾಳೆ.

Advertisement

ಸದ್ಯ ಈ ಬಾಲಕಿಯನ್ನು ನಿನ್ನೆ ರಾತ್ರಿ ನೆಲಮಂಗಲದ ದತ್ತು ಕೇಂದ್ರದಲ್ಲಿ ಇರಿಸಲಾಗಿತ್ತು. ಮಲತಾಯಿಯನ್ನು ಮಹಿಳೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.

Advertisement
Tags :
LatestNewsNewsKannadaಕಬ್ಬಿಣನೆಲಮಂಗಲ
Advertisement
Next Article