ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊಟ್ಟ ಮಾತು ಉಳಿಸಿಕೊಂಡ ‘ಹನುಮಾನ್’ ಚಿತ್ರತಂಡ

ರಾಮ ಮಂದಿರ ನಿರ್ಮಾಣಕ್ಕೆ ಕೋಟ್ಯಂತರ ಮಂದಿ ದೇಣಿಗೆ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿರುವ ‘ಹನುಮಾನ್’ ತಂಡ ಸಿನಿಮಾ ಬಿಡುಗಡೆಗೆ ಮುನ್ನವೇ ರಾಮ ಮಂದಿರಕ್ಕೆ ದೇಣಿಗೆ ನೀಡುವುದಾಗಿ ಘೋಷಿಸಿತ್ತು, ಅಂತೆಯೇ ಚಿತ್ರತಂಡ ದೇಣಿಗೆ ನೀಡಿದೆ.
09:20 PM Jan 21, 2024 IST | Ashika S

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಕೋಟ್ಯಂತರ ಮಂದಿ ದೇಣಿಗೆ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿರುವ ‘ಹನುಮಾನ್’ ತಂಡ ಸಿನಿಮಾ ಬಿಡುಗಡೆಗೆ ಮುನ್ನವೇ ರಾಮ ಮಂದಿರಕ್ಕೆ ದೇಣಿಗೆ ನೀಡುವುದಾಗಿ ಘೋಷಿಸಿತ್ತು, ಅಂತೆಯೇ ಚಿತ್ರತಂಡ ದೇಣಿಗೆ ನೀಡಿದೆ.

Advertisement

ಮಾರಾಟವಾಗುವ ಪ್ರತಿ ಟಿಕೆಟ್​ನ ಐದು ರೂಪಾಯಿ ಮೊತ್ತವನ್ನು ರಾಮ ಮಂದಿರಕ್ಕೆ ದೇಣಿಗೆ ನೀಡುವುದಾಗಿ ಚಿತ್ರತಂಡ ಮೊದಲೇ ಘೋಷಿಸಿತ್ತು.

ಅಂತೆಯೇ ಈವರೆಗೆ 53.28 ಲಕ್ಷ ಟಿಕೆಟ್​ಗಳನ್ನು ಚಿತ್ರತಂಡ ಮಾರಾಟ ಮಾಡಿದ್ದು ಪ್ರತಿ ಟಿಕೆಟ್​ಗೆ ಐದು ರೂಪಾಯಿಯಂತೆ 2.66 ಕೋಟಿ ರೂಪಾಯಿ ಮೊತ್ತವನ್ನು ಚಿತ್ರತಂಡ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದೆ.

Advertisement

‘ಹನುಮಾನ್’ ಚಿತ್ರತಂಡ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ಇದು ಮೊದಲೇನೂ ಅಲ್ಲ. ಈ ಹಿಂದೆ 14.85 ಲಕ್ಷ ರೂಪಾಯಿ ಹಣವನ್ನು ಚಿತ್ರತಂಡ ದೇಣಿಗೆ ನೀಡಿತ್ತು.

ಇದು ಪ್ರೀಮಿಯರ್ ಶೋನ ಟಿಕೆಟ್ ಮಾರಾಟದಿಂದ ಒಟ್ಟಾಗಿದ್ದ ಹಣದ ಭಾಗವಾಗಿತ್ತು. ಈಗ ಮತ್ತೆ 2.66 ಕೋಟಿ ರೂಪಾಯಿ ಮೊತ್ತವನ್ನು ದೇಣಿಗೆ ನೀಡಿದೆ. ಆ ಮೂಲಕ ಕೊಟ್ಟ ಮಾತನ್ನು ಚಿತ್ರತಂಡ ಉಳಿಸಿಕೊಂಡಿದೆ.

Advertisement
Tags :
‘ಹನುಮಾನ್’LatetsNewsNewsKannadaಚಿತ್ರತಂಡದೇಣಿಗೆರಾಮ ಮಂದಿರ
Advertisement
Next Article