ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚುನಾವಣೆಯಲ್ಲಿ ನಿಲ್ಲುವ ನಿರ್ಧಾರ ಮಾಡಿಲ್ಲ: ಡಾಲಿ ಧನಂಜಯ್

ಲೋಕಸಭಾ  ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಧನಂಜಯ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದ್ದು, ಈ ಬಗ್ಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
08:37 AM Feb 22, 2024 IST | Ashika S

ಬೆಂಗಳೂರು:  ಲೋಕಸಭಾ  ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಧನಂಜಯ್ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದ್ದು, ಈ ಬಗ್ಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement

‘ಫೋಟೋ’ ಸಿನಿಮಾದ ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಬಂದಿದ್ದ ಅವರು ಈ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

‘ಕಲಾವಿದರಾದ ನಾವು ಎಮೋಷನಲ್​ ಆಗಿರುತ್ತೇವೆ. ಹಾಗಾಗಿ ಕೆಲವು ಬೆಳವಣಿಗೆಗಳಿಗೆ ರಿಯಾಕ್ಟ್​ ಮಾಡಿರುತ್ತೇವೆ. ರಾಜಕಾರಣ ಬೇರೆ, ನಾಯಕನಾಗಿರುವುದು ಬೇರೆ. ಅದಕ್ಕೆ ಅದರದ್ದೇ ಆದಂತಹ ಗುಣಗಳು ಇರುತ್ತವೆ. ಅದನ್ನೆಲ್ಲ ನಿಭಾಯಿಸುವ ಶಕ್ತಿ ಇರಬೇಕು. ಅದಕ್ಕೆಲ್ಲ ಸದ್ಯಕ್ಕೆ ನಾನು ಸಿದ್ಧನಿಲ್ಲ’ ಎಂದು ಡಾಲಿ ಹೇಳಿದ್ದಾರೆ.

Advertisement

ಒಂದು ವೇಳೆ ಆಫರ್​ ಬಂದರೆ ರಾಜಕೀಯಕ್ಕೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ ‘ಖಂಡಿತಾ ಇಲ್ಲ’ ಎಂದು ಅವರು ಉತ್ತರಿಸಿದ್ದಾರೆ.

‘ನೀವು ಗಮನಿಸಿರಬಹುದು. ಬೇರೆ ಅಭ್ಯರ್ಥಿಗಳ ಪರವಾಗಿ ನಾನು ಚುನಾವಣಾ ಪ್ರಚಾರಗಳಿಗೆ ಹೋಗಿಲ್ಲ. ಯಾರೂ ಕರೆದಿಲ್ಲ ಅಂತೇನೂ ಇಲ್ಲ. ನನಗೂ ಎಲ್ಲ ಪಕ್ಷಗಳಲ್ಲಿ ಗೆಳೆಯರು ಇದ್ದಾರೆ. ಕರೆದಿದ್ದರೂ ಕೂಡ ನಾನು ಎಲೆಕ್ಷನ್​ ಪ್ರಚಾರಕ್ಕೆ ಹೋಗಿಲ್ಲ. ಯಾಕೆಂದರೆ, ಅದರಲ್ಲಿ ತೊಡಗಿಕೊಳ್ಳಲು ನನಗೆ ಇಷ್ಟ ಇಲ್ಲ. ನಾನು ಕಾಮನ್​ ಮ್ಯಾನ್​ ಆಗಿ ಇರಲು ಇಷ್ಟಪಡುತ್ತೇನೆ ಡಾಲಿ ಹೇಳಿದ್ದಾರೆ.

‘ರಾಜಕಾರಣ ನನಗೆ ಗೊತ್ತಿಲ್ಲ. ಸಮಾಜದಲ್ಲಿ ಕೆಳಗೆ ಇರುವ ಜನರನ್ನು ಮೇಲಕ್ಕೆ ಎತ್ತುವ ಕೆಲಸ ಮಾಡುವವನೇ ಒಳ್ಳೆಯ ನಾಯಕ. ಅವರು ಯಾವ ಪಕ್ಷದಲ್ಲಾದರೂ ಇರಲಿ. ಅವರಿಗೆ ಸ್ಪಂದಿಸುವವರೆಲ್ಲ ಒಳ್ಳೆಯ ಪ್ರಜೆಗಳು’ ಎಂದು ಡಾಲಿ ಧನಂಜಯ್​ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಲಿಡ್ಕರ್​ ಉತ್ಪನ್ನಗಳಿಗೆ ಧನಂಜಯ್​ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಡಾಲಿ ಬರೆದ ಸಾಲುಗಳನ್ನು ಓದಿದ್ದರು. ಈ ಎಲ್ಲ ಕಾರಣಗಳಿಂದಾಗಿ ಧನಂಜಯ್​ ಹೆಸರು ರಾಜಕೀಯ ವಲಯದಲ್ಲಿ ಹೆಚ್ಚು ಕೇಳಿಬರಲು ಆರಂಭಿಸಿದೆ. ತಮ್ಮ ಬಗ್ಗೆ ಹಬ್ಬಿದ್ದ ಗಾಸಿಪ್​ಗಳಿಗೆ ಅವರು ಉತ್ತರ ನೀಡಿದ್ದಾರೆ.

Advertisement
Tags :
LatetsNewsNewsKannadaಡಾಲಿ ಧನಂಜಯಪ್ರತಾಪ್ ಸಿಂಹಲೋಕಸಭಾ ಚುನಾವಣೆ
Advertisement
Next Article