ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಸಹಕರಿಸುವಂತೆ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ

ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.
04:21 PM Mar 15, 2024 IST | Ashika S

ಬೆಂಗಳೂರು: ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.

Advertisement

ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್​ನಿಂದ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದರು. ಆದ್ರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದರು.

Advertisement

ಈ ಹಿನ್ನೆಲೆಯಲ್ಲಿ ಕೋರ್ಟ್​, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

Advertisement
Tags :
bengaluruLatetsNewsNewsKannadaವಂಚನೆ
Advertisement
Next Article