ಎಚ್.ಡಿ ದೇವೇಗೌಡರೇ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುವುದೇ ಡೌಟ್ ಎಂದ ಸಿಎಂ ಇಬ್ರಾಹಿಂ
ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೆಗೌಡ ಆದೇಶ ಹೊರಡಿಸಿದ್ದರು. ಇದೀಗ ಆ ಬಗ್ಗೆ ಸ್ವತಃ ಸಿಎಂ ಇಬ್ರಾಹಿಂ ಮಾತನಾಡಿದ್ದಾರೆ.
ತಾವೀಗಲೂ ಪಕ್ಷದ ಅಧ್ಯಕ್ಷ ಎಂದು ಹೇಳಿದ್ದಾರೆ. ಅಲ್ಲದೆ, ಹೆಚ್.ಡಿ ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಹೇಳಿದ್ದಾರೆ.
ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ಲವೋ ಎಂಬ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡರೆ ಏನು ಮಾಡುತ್ತಾರೆ? ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದು ಹಾಕಿದರೆ ಏನು ಮಾಡುತ್ತೀರಿ? ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಈಗಲೂ ಮನವಿ ಮಾಡುತ್ತೇವೆ, ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಅವರು ದೇವೇಗೌಡರನ್ನು ಒಯ್ತಾಯಿಸಿದ್ದಾರೆ.