ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ವಿಡಿಯೋ ಕೇಸ್: "ಎಸ್​ಐಟಿ ಎಂದರೆ ಸಿದ್ದು, ಶಿವಕುಮಾರ್ ಟೀಂ"

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
01:33 PM May 07, 2024 IST | Ashitha S

ಬೆಂಗಳೂರು:  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Advertisement

ನಗರದ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್​​ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್​ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್​ ಗಾಂಧಿಯವರನ್ನು ಇನ್ನು ಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Advertisement

ನಾನು ಪ್ರಜ್ವಲ್​ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಪ್ರಜ್ವಲ್​​ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಎಸ್​​ಐಟಿಯಿಂದ ನ್ಯಾಯಯುತವಾದ ತನಿಖೆ ಸಾಗದು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಕುಮಾರಸ್ವಾಮಿ ಆಗ್ರಹಿಸಿದರು.

 

Advertisement
Tags :
BJPCongressGOVERNMENTindiaJDSKARNATAKANewsKarnatakaಬೆಂಗಳೂರು
Advertisement
Next Article