ಇಂದು ಎಚ್ ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ಎದುರಿಸಬೇಕಿದೆ.
09:04 AM May 13, 2024 IST | Nisarga K
ಬೆಂಗಳೂರು: ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ಎದುರಿಸಬೇಕಿದೆ.
Advertisement
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ.
Advertisement
Advertisement