ರಾಮಮಂದಿರ ಉದ್ಘಾಟನೆಗೆ ಹೆಚ್ಡಿಕೆ ಕುಟುಂಬಕ್ಕೆ ಆಹ್ವಾನ
ಅಯೋಧ್ಯೆ ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬವನ್ನು ಆಹ್ವಾನಿಸಲಾಗಿದೆ.
11:25 AM Dec 26, 2023 IST
|
Ramya Bolantoor
ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬವನ್ನು ಆಹ್ವಾನಿಸಲಾಗಿದೆ.
Advertisement
ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮೈತ್ರಿ ಬಳಿಕ ದೊಡ್ಡ ಗೌಡರ ಕುಟುಂಬದ ಸದಸ್ಯರು ದೆಹಲಿ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
Advertisement
Advertisement
Next Article