For the best experience, open
https://m.newskannada.com
on your mobile browser.
Advertisement

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.
01:20 PM May 19, 2024 IST | Ashitha S
ಸುರತ್ಕಲ್  ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ

ಮಂಗಳೂರು: ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.

Advertisement

ಶುಕ್ರವಾರ ಸಂದೀಪ್‌ ಶೆಟ್ಟಿ ಅವರು ತಮ್ಮ 10 ವರ್ಷದ ಮಗನ ಹರಕೆಯ ಸಲುವಾಗಿ ಮಗನ ಜತೆ ಶಬರಿಮಲೆಗೆ ತಂಡದೊಂದಿಗೆ ಹೊರಟಿದ್ದು, ಅಯ್ಯಪ್ಪ ಸನ್ನಿಧಾನದ 18 ಮೆಟ್ಟಿಲು ಬಳಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಯುವಕ ಮಂಡಲದ ಪದಾಧಿಕಾರಿಯಾಗಿದ್ದರು. ನಿತ್ಯಾನಂದ ಕೆಟರರ್ಸ್‌ ಅನ್ನು ನಡೆಸುತ್ತಿದ್ದರು. ಸಂದೀಪ್‌ ಶೆಟ್ಟಿ ಅವರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Advertisement

Advertisement
Tags :
Advertisement