ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ: ಬಸ್ಸಿನಲ್ಲೇ ಹೃದಯಾಘಾತ; ಯುವಕ ಮೃತ್ಯು

ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ಸಿನಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಘಟನೆ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ
05:14 PM Jan 30, 2024 IST | Ramya Bolantoor

ಉಡುಪಿ: ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ಸಿನಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಘಟನೆ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ. ಗದಗ ಜಿಲ್ಲೆಯ ಈರಪ್ಪ ಎಂಬವರ ಮಗ ಚಂದ್ರು (24) ಮೃತದುರ್ದೈವಿ. ಇವರು ದಾವಣಗೆರೆಗೆ ಹೋಗಲು ದುರ್ಗಾಂಬ ಬಸ್‌ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ಉಡುಪಿಯಲ್ಲಿ ಬಸ್ ಹತ್ತಿ ಪ್ರಯಾಣಿಸುತ್ತಿದ್ದ ಇವರು, ದಾರಿ ಮಧ್ಯೆ ತೀವ್ರವಾಗಿ ಅಸ್ವಸ್ಥಗೊಂಡರು.
ಕೂಡಲೇ ಚಾಲಕ ಬಸ್ಸನ್ನು ಸಿದ್ದಾಪುರ ಪೇಟೆಯಲ್ಲಿ ನಿಲ್ಲಿಸಿ ಅಸ್ವಸ್ಥಗೊಂಡ ಚಂದ್ರು ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಚಂದ್ರು ಮೃತಪಟ್ಟಿ ರುವುದಾಗಿ ತಿಳಿಸಿದರು.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
haertattackLatestNewsNewsKannadaYOUTHಉಡುಪಿ
Advertisement
Next Article