For the best experience, open
https://m.newskannada.com
on your mobile browser.
Advertisement

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿಯ ಮಾಚೋಹಳ್ಳಿ ಗೇಟ್‌ನಲ್ಲಿ ನಡೆದಿದೆ.
06:45 PM May 17, 2024 IST | Chaitra Kulal
ಕಿಯಾ ಕಾರಿಗೆ ಅಡ್ಡ ಬಂದ ಕುದುರೆ  ಸರಣಿ ಅಪಘಾತ

ರಾಮನಗರ: ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿಯ ಮಾಚೋಹಳ್ಳಿ ಗೇಟ್‌ನಲ್ಲಿ ನಡೆದಿದೆ.

Advertisement

ಈ ಅಪಘಾತದಲ್ಲಿ ಲಾರಿ, ಕಾರು, KSRTC ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಿಯಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿವೆ.

ಕಿಯಾ ಕಾರಿಗೆ ಟ್ಟಿ ಬಂದ ಕುದುರೆ ಸ್ಥಳದಲ್ಲೇ ಮೃತಪಟ್ಟಿದೆ. ಕಿಯಾ ಕಾರು ಮೊದಲು ಕುದುರೆಗೆ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಲಾರಿಗೆ ಗುದ್ದಿದೆ. ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಕೆ‌ಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Advertisement

ಈ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸೋಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement