For the best experience, open
https://m.newskannada.com
on your mobile browser.
Advertisement

ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆ: 30 ಲಕ್ಷ ರೂ, 250 ಗ್ರಾಂ ಚಿನ್ನ ದೋಚಿ ಪರಾರಿ

ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ.
05:09 PM Apr 03, 2024 IST | Chaitra Kulal
ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆ  30 ಲಕ್ಷ ರೂ  250 ಗ್ರಾಂ ಚಿನ್ನ ದೋಚಿ ಪರಾರಿ

ಆನೇಕಲ್: ಸೆಕ್ಯೂರಿಟಿ ಗಾರ್ಡ್‌ನಿಂದಲೇ ಮನೆ ದರೋಡೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ.

Advertisement

ಮಧುಸೂದನ್ ರೆಡ್ಡಿ ಎಂಬುವವರ ಮನೆಯಲ್ಲಿ 30 ಲಕ್ಷ ರೂ. ನಗದು, 250 ಗ್ರಾಂ ಚಿನ್ನ ದೋಚಿ ರೋಶನ್ ಎಂಬಾತ ಎಸ್ಕೇಪ್ ಆಗಿದ್ದಾನೆ. ಮಧುಸೂದನ್ ರೆಡ್ಡಿ ಒಂಟಿಯಾಗಿದ್ದನ್ನು ತಿಳಿದ ಮನೆಯ ಸೆಕ್ಯೂರಿಟಿ ಗಾರ್ಡ್ ರೋಶನ್, ರಾತ್ರಿ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿಕೊಂಡಿದ್ದನು. ಮೊದಲ ಮಹಡಿಯ ಹಿಂಬಾಗಿಲು‌ ಮುರಿದು ಒಳನುಗ್ಗಿದ್ದಾರೆ. ನಂತರ ಒಂಟಿಯಾಗಿದ್ದ ಮಧುಸೂದನ್ ರೆಡ್ಡಿ ಅವರ ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಳೆದ ಮೂರು ತಿಂಗಳಿಂದ ಪತ್ನಿ ಜತೆ ರೋಶನ್‌ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದನು. ಕಳೆದ ಎರಡು ದಿನಗಳ ಹಿಂದೆ ಸಂಪ್ ಕ್ಲೀನ್ ಮಾಡಲು ಓರ್ವ ಆರೋಪಿ ಬಂದಿದ್ದು, ತಡರಾತ್ರಿ ಸೆಕ್ಯೂರಿಟಿ ಗಾರ್ಡ್ ವಾಸವಿದ್ದ ಕೊಠಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿ, ಬಳಿಕ ಮನೆ ದೋಚಿ ರೋಶನ್‌ ಮತ್ತು ಆತನ ಗ್ಯಾಂಗ್‌ ಪರಾರಿಯಾಗಿದ್ದಾರೆ. ಪ್ರಕರಣ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement

Advertisement
Tags :
Advertisement