ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪತ್ನಿಯ ಕಿರುಕುಳ : ಗೋಡೆ ಮೇಲೆ ಡೆತ್‍ನೋಟ್ ಬರೆದು ಪತಿ ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
03:06 PM Mar 26, 2024 IST | Nisarga K
ಪತ್ನಿಯ ಕಿರುಕುಳ : ಗೋಡೆ ಮೇಲೆ ಡೆತ್‍ನೋಟ್ ಬರೆದು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮೃತನನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪ ಮಾಡಿದ್ದಾರೆ.

7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡ್ತಿದ್ದಳು. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್ ತಾಯಿ ಮನೆಗೆ ಬಂದಿದ್ದಳು ಎಂಬ ಮಾಹಿತಿ ತಿಳಿದು ಬಂದಿದೆ.

Advertisement

ಮಾ.11 ರಂದು ಅಕ್ಮಲ್ ಅನ್ಸರ್‍ನನ್ನು ಮನೆಗೆ ಕರೆಸಿಕೊಂಡು ಪತ್ನಿ ಹಾಗೂ ಪತ್ನಿ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಇದರಿಂದ ನೊಂದು ಅಕ್ಮಲ್ ಅನ್ಸರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಹೋದರ ಆರೋಪಿಸಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅಕ್ಮಲ್ ಅನ್ಸರ್ ಪತ್ನಿ, ಮಾವ ಮುನಾವರ್ ಸುಬಾನ್, ಪತ್ನಿಯ ಸಂಬಂಧಿಕರಾದ ಅಖೀಬ್, ಅಬ್ದುಲ್ ರಹಮ್ಮಾನ್ ಮನ್ಸೂರ್ ಸೇರಿದಂತೆ ಏಳು ಜನರ ಮೇಲೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement
Tags :
assultbengalurudeathhusbandLatestNewsNewsKarnatakaSUCIDEWIFE
Advertisement
Next Article