ಕಾನೂನು ಬಾಹಿರ ಅನಾಥಾಶ್ರಮ: ದಾರುಲ್ ಯತೀಂಖಾನಾ ಸಂಸ್ಥೆ ವಿರುದ್ಧ ಎಫ್ ಐಆರ್
ಬೆಂಗಳೂರು: ಬೆಂಗಳೂರಿನ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ಸಂಸ್ಥೆ ನಡೆಸುತ್ತಿರುವ ಅನಾಥಾಶ್ರಮದಲ್ಲಿರುವ ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ. ಹೀಗಾಗಿ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ಸಂಸ್ಥೆ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಫ್ ಐಆರ್ ದಾಖಲಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಬೆಂಗಳೂರಿನ ಆರ್ಟಿ ನಗರ ಪೋಸ್ಟ್ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ‘ದಾರುಲ್ ಉಲೂಮ್ ಸಯ್ಯದಿಯಾ ಯತಿಂ ಖಾನಾ’ ಎಂಬ ಅನಾಥಾಶ್ರಮದಲ್ಲಿ ಬುಧವಾರ ದಿಢೀರ್ ತಪಾಸಣೆ ನಡೆಸಿದ್ದು, ಈ ವೇಳೆ ಸುಮಾರು 200 ಮಕ್ಕಳನ್ನು ಕಳಪೆ ಗುಣಮಟ್ಟದಲ್ಲಿ ಇರಿಸಲಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಇದೇ ವಿಚಾರವಾಗಿ ಇದೀಗ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಂಸ್ಥೆ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದೆ. ಈ ವಿಷಯದ ಬಗ್ಗೆ ಎಫ್ಐಆರ್ ದಾಖಲಿಸಲು ಜಿಲ್ಲಾಧಿಕಾರಿ ದಯಾನಂದ ಕೆಎ ಅವರಿಗೂ ಪ್ರತಿಯನ್ನು ಲಗತ್ತಿಸಲಾಗಿದೆ.