ಯುಪಿಯಲ್ಲೊಂದು ಅಮಾನವೀಯ ಘಟನೆ: ವಿದ್ಯಾರ್ಥಿ ಮೇಲೆ ಮೂತ್ರ ಮಾಡಿ, ಥಳಿತ
ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಘಟನೆ ನಡೆದಿದೆ ಮೀರತ್ನಲ್ಲಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದೆ.
05:56 PM Nov 27, 2023 IST
|
Ashika S
ಮೀರತ್: ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಘಟನೆ ನಡೆದಿದೆ ಮೀರತ್ನಲ್ಲಿ 12 ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದೆ.
Advertisement
ನವೆಂಬರ್ 13 ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ.
ಹಲ್ಲೆ ಮಾಡಬೇಡಿ ಎಂದು ಯುವಕ ಎಷ್ಟೇ ಬೇಡಿಕೊಂಡರೂ ಆರೋಪಿಗಳು ಕೇಳಲಿಲ್ಲ. ಮತ್ತೊಬ್ಬ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸಮೀಪದಲ್ಲಿದ್ದ ಕೆಲವು ಸ್ನೇಹಿತರು ಈ ಭಯಾನಕ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಷಯ ಪೊಲೀಸರ ಗಮನಕ್ಕೆ ಬಂದಿದೆ. ಪೊಲೀಸರು ಗುಂಪಿನಲ್ಲಿದ್ದ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Advertisement
Advertisement
Next Article