For the best experience, open
https://m.newskannada.com
on your mobile browser.
Advertisement

2.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ- ಬ್ರಹ್ಮಗಿರಿ ರಸ್ತೆ ಉದ್ಘಾಟನೆ

ನಗರಸಭೆ ವ್ಯಾಪ್ತಿಯಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಬ್ರಹ್ಮಗಿರಿ ಜಂಕ್ಷನ್ ರಸ್ತೆ, ವಿವೇಕಾನಂದ ರಸ್ತೆ ಹಾಗೂ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ವ್ಯಾಘ್ರ ಚಾಮುಂಡಿ ಗಡುವಾಡು ಕ್ಷೇತ್ರದ ಮೇಲ್ಛಾವಣಿಯನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
05:58 PM Mar 11, 2024 IST | Ashika S
2 50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ  ಬ್ರಹ್ಮಗಿರಿ ರಸ್ತೆ ಉದ್ಘಾಟನೆ

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಬ್ರಹ್ಮಗಿರಿ ಜಂಕ್ಷನ್ ರಸ್ತೆ, ವಿವೇಕಾನಂದ ರಸ್ತೆ ಹಾಗೂ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ವ್ಯಾಘ್ರ ಚಾಮುಂಡಿ ಗಡುವಾಡು ಕ್ಷೇತ್ರದ ಮೇಲ್ಛಾವಣಿಯನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಅವರು, ಉಡುಪಿ ನಗರದ ಪ್ರಮುಖ ರಸ್ತೆಯಾಗಿರುವ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಬ್ರಹ್ಮಗಿರಿ ಜಂಕ್ಷನ್ ಸಂಪರ್ಕಿಸುವ ರಸ್ತೆ ಅಭಿವೃದ್ಧಿಯ ಕನಸು 2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಮೂಲಕ ನನಸಾಗಿದೆ. ಮುಂದಿನ ದಿನದಲ್ಲಿಯೂ ನಗರದ ಮೂಲ ಸೌಕರ್ಯದ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ರಶ್ಮಿ ಸಿ. ಭಟ್, ಅಮೃತ ಕೃಷ್ಣಮೂರ್ತಿ ಆಚಾರ್ಯ, ಪಕ್ಷದ ಮುಖಂಡರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಭಗವಾನ್ ದಾಸ್, ದೇವದಾಸ್ ಶೆಟ್ಟಿಗಾರ್, ಆನಂದ ಕಾರ್ನಾಡ್ ಉಪಸ್ಥಿತರಿದ್ದರು.

Advertisement

Advertisement
Tags :
Advertisement