ಬಿಜೆಪಿಗೆ ಮರಳಿದ ಜನಾರ್ಧನ್ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮಿ
ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ವಾಪಾಸ್ ಆಗಿ ಮತ್ತೆ ಕಮಲವನ್ನು ಮೇಲೆತ್ತಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು.
10:53 AM Mar 25, 2024 IST | Nisarga K
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ವಾಪಾಸ್ ಆಗಿ ಮತ್ತೆ ಕಮಲವನ್ನು ಮೇಲೆತ್ತಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು.
Advertisement
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೈಗೆ ಧ್ವಜ ಕೊಟ್ಟು ಶಾಲು ಹೊದಿಸಿ ಜನಾರ್ಧನ್ ರೆಡ್ಡಿ ಮತ್ತು ಅವರ ಪತ್ನಿಯನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷಕ್ಕೆ ಸ್ವಾಗತಿಸಿದರು.ರೆಡ್ಡಿಯವರು ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಕೂಡ ಆಗಮಿಸಿದ್ದರು.
Advertisement
Advertisement