ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೆರೋಸಾ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ: ಮುಂದುವರಿದ ತನಿಖೆ

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ವರದಿ ಮೇಲೆ ಪ್ರಾಥಮಿಕ ತನಿಖೆ ಮುಂದುವರೆದಿದೆ.
05:31 PM Feb 19, 2024 IST | Ashitha S

ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ವರದಿ ಮೇಲೆ ಪ್ರಾಥಮಿಕ ತನಿಖೆ ಮುಂದುವರೆದಿದೆ.

Advertisement

ಜೆರೋಸಾ ಶಾಲೆಯ ಏಳನೇ ತರಗತಿ ಮಕ್ಕಳ ಹೇಳಿಕೆ ಹಾಗೂ ಪೋಷಕರ ಹೇಳಿಕೆಯನ್ನು ದಾಖಲಿಸಿರೋ ಶಿಕ್ಷಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಲಿಖಿತ ಹೇಳಿಕೆಗಳನ್ನು ಐಎಎಸ್ ಅಧಿಕಾರಿ ಡಾ.ಆಕಾಶ್.ಎಸ್ ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದಾರೆ. ಶಾಲೆಯಲ್ಲೇ ಕಳೆದ ಶನಿವಾರ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಮಕ್ಕಳು ಹಾಗೂ ಪೋಷಕರ ಲಿಖಿತ ಹೇಳಿಕೆಗಳನ್ನು ಪಡೆಯಲಾಗಿತ್ತು.

Advertisement

ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತರಿಂದ ಡಿಡಿಪಿಐ ಕಚೇರಿಯಲ್ಲಿ ‌ ತನಿಖೆ ನಡೆಯುತ್ತಿದೆ. ದಕ್ಷಿಣಕನ್ನಡ ಡಿ.ಡಿ.ಪಿ.ಐ ವೆಂಕಟೇಶ ಸುಬ್ರಾಯ ಪಟಗಾರರಿಂದ ಮಾಹಿತಿ ಸಂಗ್ರಹವಾಗಿದೆ. ಇಲ್ಲಿ ಮಕ್ಕಳ ಮತ್ತು ಪೋಷಕರ ಲಿಖಿತ ಹೇಳಿಕೆಗಳ ವ್ಯತ್ಯಾಸಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಬೆಳಗ್ಗಿನಿಂದಲೇ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಕರು ಹಾಗೂ ಮಕ್ಕಳ ಹೇಳಿಕೆಗಳ ಸೂಕ್ಷ್ಮ ಪರಿಶೀಲನೆ ಮುಂದುವರೆದಿದೆ.

 

Advertisement
Tags :
indiaKARNATAKALatestNewsNewsKannadaಜೆರೋಸಾಮಂಗಳೂರುಶ್ರೀರಾಮ
Advertisement
Next Article