ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ
ನಟ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ನಾಳೆ (ಮಾರ್ಚ್ 1)ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
08:50 PM Feb 29, 2024 IST | Gayathri SG
ನಟ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ನಾಳೆ (ಮಾರ್ಚ್ 1)ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Advertisement
ನಾಳೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಭಿಮಾನಿಗಳಿಗೆ, ಆಪ್ತರಿಗೆ ಅಂತಿಮ ದರ್ಶನ ಅವಕಾಶವಿದೆ ಎಂದು ಅಳಿಯ ಪ್ರದೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
1953ರ ಏಪ್ರಿಲ್ 6ರಂದು ರಾಮನಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದ ಕೆ. ಶಿವರಾಮ್ 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಿನಿಮಾ ಕ್ಷೇತ್ರದಲ್ಲಿ ಹಾಗೂ ರಾಜಕೀಯದಲ್ಲಿಯೂ ಇವರು ಗುರುತಿಸಿ ಕೊಂಡಿದ್ದರು.
Advertisement
Advertisement