ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೀಚ್ ನಲ್ಲಿ ಫೋಸ್ ಕೊಡೋ ನಿಮಗೆ ಮಣಿಪುರ ನೆನಪಿಲ್ವಾ: ಖರ್ಗೆ ಕಿಡಿ

ದಕ್ಷಿಣ ಭಾರತ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಇದರನ್ನು ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. 
12:03 PM Jan 07, 2024 IST | Ashitha S

ನವದೆಹಲಿ: ದಕ್ಷಿಣ ಭಾರತ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಇದನ್ನು ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.

Advertisement

ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ ಎಂದು ಪ್ರಧಾನಿ ಮೋದಿ ಗೆ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೇವಸ್ಥಾನ ನಿರ್ಮಾಣವಾಗುತ್ತಿರುವ ಸ್ಥಳಗಳಲ್ಲಿ ಮತ್ತು ಬೀಚ್‌ಗಳಲ್ಲಿ ಫೋಟೋಶೂಟ್‌ ಮಾಡಿಸಲು ಪ್ರಧಾನಿ ನರೇಂದ್ರ ಮೋದಿಗೆ ಸಮಯವಿದೆ.

ಆದರೆ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ ಎಂದರು.

Advertisement

ಪ್ರಧಾನಿ ಮೋದಿಗೆ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋಶೂಟ್‌ಗೆ ಸಮಯವಿದೆ. ಕೇರಳ ಸೇರಿದಂತೆ ದೇವಸ್ಥಾನ ನಿರ್ಮಾಣವಾಗುತ್ತಿರುವ ಎಲ್ಲ ಕಡೆ ಅವರ ಫೋಟೋಗಳನ್ನು ನೋಡಬಹುದು. ಆದರೆ ಮಣಿಪುರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಅಲ್ಲಿ ಜನ ಸಾಯುತ್ತಿದ್ದಾರೆ. ಆ ಮಹಾಪುರುಷ ಅಲ್ಲಿಗೆ ಏಕೆ ಹೋಗಲ್ಲ? ಅದು ದೇಶದ ಭಾಗವಲ್ಲವೇ?' ಎಂದು ಕಿಡಿಕಾರಿದ್ದಾರೆ.

Advertisement
Tags :
GOVERNMENTindiaKARNATAKALatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಮಣಿಪುರ
Advertisement
Next Article