ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಸುಳ್ಳು ಆರೋಪ: ಕೋಟ ಶ್ರೀನಿವಾಸ ಪೂಜಾರಿ

ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ರಾಷ್ಟ್ರ ವಿರೋಧಿಗಳ ಬೆಂಬಲಿಗರ ಸ್ಪರ್ಧೆಯಾಗಿದೆ. ಸ್ವಾವಲಂಬಿ ರಾಷ್ಟ್ರ ನಿರ್ಮಾಣವೆ ಬಿಜೆಪಿ ಗುರಿಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾರ್ಕಳದಲ್ಲಿ ನ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ನಡೆದ ಚುನಾವಣಾ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
08:43 PM Mar 25, 2024 IST | Maithri S

ಕಾರ್ಕಳ: ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ರಾಷ್ಟ್ರ ವಿರೋಧಿಗಳ ಬೆಂಬಲಿಗರ ಸ್ಪರ್ಧೆಯಾಗಿದೆ. ಸ್ವಾವಲಂಬಿ ರಾಷ್ಟ್ರ ನಿರ್ಮಾಣವೆ ಬಿಜೆಪಿ ಗುರಿಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾರ್ಕಳದಲ್ಲಿ ನ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ನಡೆದ ಚುನಾವಣಾ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

Advertisement

ತಿಂಗಳಿಗೆ  22 ಲಕ್ಷ ಕ್ವಿಂಟಾಲ್ ಅಕ್ಕಿ ಕೇಂದ್ರ ಸರಕಾರವು ರಾಜ್ಯದ ಬಡವರಿಗೆ ಹಂಚುವ ಕೆಲಸ ಮಾಡುತ್ತಿದೆ‌. ಮುಖ್ಯಮಂತ್ರಿ ಸಿದ್ದಾರಮಯ್ಯರವರು ಬಡವರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರದ ನೀಡುತಿಲ್ಲ ಎಂದು ಸುಳ್ಳು ಹೇಳಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ದಲ್ಲಿ ಅಡಳಿತ ಮಾಡುತ್ತಿರುವ ಕಾಂಗ್ರೆಸ್ ಪಕ್ಷವು ಒಂದು ವರ್ಷದಲ್ಲಿ 9 ಮೀಟರ್ ರಸ್ತೆ ಸೇರಿದಂತೆ ಒಂದು ಅಂಗನವಾಡಿಯು ನಿರ್ಮಾಣ ಮಾಡಿಲ್ಲ, ಸಂದ್ಯಾ ಸುರಕ್ಷಾ, ವಿಧವಾ ವೇತನ ಪಿಂಚಣಿಯನ್ನು ರಾಜ್ಯ ಸರಕಾರವು ನಿಲ್ಲಿಸಿದೆ. ನೂರು ಸುಳ್ಳು ಹೇಳಿ ಒಂದು ಸತ್ಯ ಹೇಳಲು ಸಿದ್ದರಾಮಯ್ಯ ಹೊರಟಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ  ಗೆದ್ದರೆ ಗ್ಯಾರಂಟಿ ಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡು ಬರುತ್ತಿದೆ ಎಂದು ಹೇಳಿದರು.

ಹಿರಿಯ ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಕಛೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು‌. ಹಿರಿಯ ಮುಖಂಡ ಎಂಕೆ ವಿಜಯಕುಮಾರ್ ಮಾತನಾಡಿ ಐವತ್ತು ವರ್ಷಗಳ ಕಾಂಗ್ರೆಸ್ ಪಕ್ಷ ಕ್ಕೆ ಕಾಲ ಶುಕ್ಲಪಕ್ಷವಾಗಿದ್ದು ಮುಂದಿನ ಐವತ್ತು ವರ್ಷಗಳ ಕಾಲವು ಬಿಜೆಪಿಯು ಸುಭಿಕ್ಷವಾಗಿ ರಾಷ್ಟ್ರ ದಲ್ಲಿ ಅಡಳಿತ ಮಾಡಲಿದೆ ಎಂದರು.

Advertisement

 

Advertisement
Tags :
indiaLatestNewsNewsKannadaಕರ್ನಾಟಕಕೋಟ ಶ್ರೀನಿವಾಸ ಪೂಜಾರಿಬಿಜೆಪಿ
Advertisement
Next Article