ಕುಂದಾಪುರದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಇಲ್ಲಿನ ಕಟ್ಕೆರೆ ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ ಎಂಬವರ ಮಗಳು ರಿಷಿತಾ ಆತ್ಮಹತ್ಯೆ ಮಾಡಿಕೊಂಡವಳು.
08:55 AM Dec 22, 2023 IST
|
Ashika S
ಕುಂದಾಪುರ: ಇಲ್ಲಿನ ಕಟ್ಕೆರೆ ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ ಎಂಬವರ ಮಗಳು ರಿಷಿತಾ ಆತ್ಮಹತ್ಯೆ ಮಾಡಿಕೊಂಡವಳು.
Advertisement
ಈಕೆ 7ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಯಿಂದ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದಳು. ತಕ್ಷಣ ಮನೆಯವರು ಆಗ್ನಿಶಾಮಕ ದಳವನ್ನು ಕರೆಯಿಸಿ ಆಕೆಯನ್ನು ಮೇಲೆತ್ತಿದರಾದರೂ, ಆಕೆ ಅದಾಗಲೇ ಮೃತಪಟ್ಟಿದ್ದಳು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಕೆ ಅನೇಕ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
Advertisement
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821
Advertisement
Next Article