ಅರಬ್ಬಿ ಸಮುದ್ರದಲ್ಲಿ ಬೋಟ್ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ
ಬೋಟ್ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು
01:12 PM Mar 22, 2024 IST
|
Ashitha S
ಉಡುಪಿ: ಬೋಟ್ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು.
Advertisement
ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನದ ಬೋಟ್ ಅಪಾಯಕ್ಕೆ ಸಿಲುಕಿತ್ತು. ಬೋಟ್ನ ತಳಭಾಗ ಒಡೆದು ನೀರು ಒಳನುಗ್ಗಲಾರಂಭಿಸಿತ್ತು.
ಅಪಾಯದ ಅರಿವಾಗುತ್ತಿದ್ದಂತೆಯೇ ಬೋಟ್ನಲ್ಲಿದ್ದ ಮೀನುಗಾರರು ಪೊಲೀಸರಿಗೆ ವಿಷಯ ತಿಳಿಸಿದ್ದರು. ತಕ್ಷಣವೇ ಪೊಲೀಸರು ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದಾರೆ.
Advertisement
ಆ ಸಂದರ್ಭ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಎರಡು ನೌಕೆಗಳು ಬೋಟ್ ಬಳಿ ತೆರಳಿದವು. ಅದರಲ್ಲಿದ್ದ ಸಿಬ್ಬಂದಿ ಮೀನುಗಾರರ ರಕ್ಷಣೆ ಮಾಡಿದ್ದಾರೆ. ಜತೆಗೆ, ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಮೀನುಗಾರಿಕಾ ಬಂದರಿಗೆ ರವಾನಿಸಲಾಗಿದೆ
Advertisement
Next Article