ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅರಬ್ಬಿ ಸಮುದ್ರದಲ್ಲಿ ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ

ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್​ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು
01:12 PM Mar 22, 2024 IST | Ashitha S

ಉಡುಪಿ: ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಬೋಟ್​ ಹಾನಿಗೀಡಾಗಿ ಅಪಾಯಕ್ಕೆ ಸಿಲುಕಿದ್ದರು.

Advertisement

ಕಲ್ಮಾಡಿಯ ಪ್ಯಾರು ಎಸ್. ಎಂಬವರ ಒಡೆತನದ ಬೋಟ್​ ಅಪಾಯಕ್ಕೆ ಸಿಲುಕಿತ್ತು. ಬೋಟ್​​ನ ತಳಭಾಗ ಒಡೆದು ನೀರು ಒಳನುಗ್ಗಲಾರಂಭಿಸಿತ್ತು.

ಅಪಾಯದ ಅರಿವಾಗುತ್ತಿದ್ದಂತೆಯೇ ಬೋಟ್​ನಲ್ಲಿದ್ದ ಮೀನುಗಾರರು ಪೊಲೀಸರಿಗೆ ವಿಷಯ ತಿಳಿಸಿದ್ದರು. ತಕ್ಷಣವೇ ಪೊಲೀಸರು ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದಾರೆ.

Advertisement

ಆ ಸಂದರ್ಭ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಎರಡು ನೌಕೆಗಳು ಬೋಟ್​ ಬಳಿ ತೆರಳಿದವು. ಅದರಲ್ಲಿದ್ದ ಸಿಬ್ಬಂದಿ ಮೀನುಗಾರರ ರಕ್ಷಣೆ ಮಾಡಿದ್ದಾರೆ. ಜತೆಗೆ, ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಮೀನುಗಾರಿಕಾ ಬಂದರಿಗೆ ರವಾನಿಸಲಾಗಿದೆ

Advertisement
Tags :
indiaKARNATAKALatestNewsNewsKannadaಉಡುಪಿಮೀನುಗಾರ
Advertisement
Next Article