ಅರಿವಳಿಕೆ ನೀಡಲು ಹೋದ ಡಾಕ್ಟರ್ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ
ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ
01:01 PM Nov 01, 2023 IST
|
Ramya Bolantoor
ಬೆಂಗಳೂರು: ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದರೆ, ಬೋನಿಗೆ ಬೀಳದೆ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ವೈದ್ಯ ಕಿರಣ್ ಮೇಲೆ ದಾಳಿ ಮಾಡಿ ಪರಾರಿಯಾಗಿದೆ.
Advertisement
ಅರವಳಿಕೆ ಚುಚ್ಚುಮದ್ದು ನೀಡಲು ಬಂದಿದ್ದ ವೈದ್ಯ ಕಿರಣ್ ಮೇಲೆ ಚಿರತೆ ದಾಳಿ ಕುತ್ತಿಗೆಗೆ ಪರಚಿದೆ. ಕೂಡಲೇ ಅಂಬ್ಯುಲೆನ್ಸ್ ಮೂಲಕ ವೈದ್ಯ ಕಿರಣ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಇದೇ ವೇಳೆ ಚಿರತೆ ಶಾರ್ಪ್ ಶೂಟರ್ ಮೇಲೂ ದಾಳಿ ಮಾಡಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Advertisement
Advertisement
Next Article