ಇನ್ಸ್ಪೆಕ್ಟರ್ ಪುತ್ರನಿಂದ ವ್ಯಕ್ತಿ ಹತ್ಯೆ; ಕೃತ್ಯ ಸಿಸಿ ಟಿವಿಯಲ್ಲಿ ಸೆರೆ
ಜೈಪುರ: ಪೊಲೀಸ್ ಇನ್ಸ್ಪೆಕ್ಟರ್ ಓರ್ವರ ಪುತ್ರ ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಇನ್ಸ್ಪೆಕ್ಟರ್ ಮನೆ ಇರುವ ಸಮೀಪದಲ್ಲೇ ಮೋಹನ್ ಅಂಗಡಿ ಹೊಂದಿದ್ದು ಈ ಕಾರಣಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಇದು ವಿಕೋಪಕ್ಕೆ ತಿರುಗಿದ್ದು, ಕ್ರಿಕೆಟ್ ಬ್ಯಾಟ್ ಹಿಡಿದುಕೊಂಡು ಬಂದ ಕ್ಷಿತಿಜ್, ಮೋಹನನನ್ನು ಮನಬಂದಂತೆ ಥಳಿಸಿದ್ದಾನೆ.
ಇದರ ಪರಿಣಾಮ ಆತ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದು, ಬಳಿಕ ಕ್ಷಿತಿಜ್ ಹಾಗೂ ಆತನ ತಂದೆ ಮೋಹನ್ ದೇಹವನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಈ ಎಲ್ಲಾ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಕ್ಷಿತಿಜನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಇನ್ಸ್ಪೆಕ್ಟರ್ ಪಾತ್ರದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
राजस्थान : जयपुर में पुलिस इंस्पेक्टर के बेटे क्षितिज शर्मा ने सब्जी बेचने वाले मोहनलाल सिंधी की क्रिकेट बैट से पीट–पीटकर जान ले ली।
🚨 Sensitive Visual🚨 pic.twitter.com/rZx3Ah6zFM
— Sachin Gupta (@SachinGuptaUP) April 4, 2024