ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜನರ ಸೇವೆ ಮತ್ತೆ ಮಾಡಲಿ ಎಂದು ಭಗವಂತ ಮರುಜನ್ಮ ನೀಡಿದ್ದಾನೆ: ಹೆಚ್.ಡಿ ಕುಮಾರಸ್ವಾಮಿ

ಮೂರನೇ ಬಾರಿ ನನಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
12:35 PM Mar 24, 2024 IST | Chaitra Kulal

ಬೆಂಗಳೂರು: ಮೂರನೇ ಬಾರಿ ನನಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿತ್ತು, ಈಗ ಮತ್ತೆ ಚಿಕಿತ್ಸೆ ಪಡೆದಿದ್ದೇನೆ ಎಂದಿದ್ದಾರೆ. ನಾಡಿನಾದ್ಯಂತ ಅಭಿಮಾನಿಗಳು, ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ಚಿಕಿತ್ಸೆ ಬಳಿಕ, ವೈದ್ಯರು ನನ್ನ ಬಳಿ ಚರ್ಚೆ ಮಾಡಿದರು. ವೈದ್ಯರು ಸಾಯಿಬಾಬಾನ ಭಕ್ತರಾಗಿದ್ದು, ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಆಪರೇಷನ್ ನೆರವೇರಿಸಿದ್ದಾರೆ. ನಾನು ಆಪರೇಷನ್ ಮಾಡಿಲ್ಲ, ಸಾಯಿಬಾಬಾನೇ ಆಪರೇಷನ್ ಮಾಡಿದ್ದು ಎಂದು ವೈದ್ಯರು ಹೇಳಿದರು. ಮತ್ತೊರ್ವ ವೈದ್ಯ ಹಂಗೇರಿಯಾದವರು, ನನಗೆ ಮರುಜನ್ಮ ನೀಡಿದ್ದಾರೆ ಎಂದರು

ಲೋಕಸಭಾ ಚುನಾವಣೆಗೆ ನನ್ನ ಕೈಲಾದ ರೀತಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಎನ್‍ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ನಡೆಸುತ್ತೇನೆ. ವೈದ್ಯರು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡಲು ಹೇಳಿದ್ದಾರೆ. ಇನ್ನೆರೆಡು ದಿನಗಳಲ್ಲಿ ಮಂಡ್ಯ ಅಭ್ಯರ್ಥಿ ಯಾರೆಂಬುದು ಫೈನಲ್ ಆಗಲಿದೆ ಎಂದರು.

Advertisement

 

 

Advertisement
Tags :
ELECTIONHD KUMARASWAMYLatestNewsLOK SABHANewsKarnatakaಬೆಂಗಳೂರು
Advertisement
Next Article