ಕನಕಪುರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವಕ ಯುವತಿ ಸಾವು
ಕನಕಪುರದಲ್ಲಿ ಭೀಕರ ದುರಂತವೊಂದು ನಡೆದುಹೋಗಿದೆ. ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಬಳಿ ತಡರಾತ್ರಿ ನಡೆದಿದೆ.
03:47 PM Dec 10, 2023 IST
|
Gayathri SG
ರಾಮನಗರ: ಕನಕಪುರದಲ್ಲಿ ಭೀಕರ ದುರಂತವೊಂದು ನಡೆದುಹೋಗಿದೆ. ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಬಳಿ ತಡರಾತ್ರಿ ನಡೆದಿದೆ.
Advertisement
ದೀಪಕ್(25) ಮತ್ತು ಶೈಲಾ(22) ಮೃತ ರ್ದುದೈವಿಗಳು. ಶೈಲಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ದೀಪಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇನ್ನು ಇಬ್ಬರು ಕೂಡ ಕಾರಿನಲ್ಲಿ ಕನಕಪುರದಿಂದ ಸ್ವಗ್ರಾಮ ಕೆಬ್ಬಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
Advertisement
Advertisement
Next Article