ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವ್ಯಕ್ತಿ​ ಬಂಧನ

ಗೋವಾ ಹೋಟೆಲ್​ ಮ್ಯಾನೇಜರ್ ಓರ್ವ ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
10:32 AM Jan 21, 2024 IST | Gayathri SG

ಗೋವಾ: ಗೋವಾ ಹೋಟೆಲ್​ ಮ್ಯಾನೇಜರ್ ಓರ್ವ ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿ ಗೌರವ್ ಕಟಿಯಾರ್ ತನ್ನ ಪತ್ನಿ ದೀಕ್ಷಾ ಗಂಗ್ವಾರ್ (27) ಅವರನ್ನ ಕೊಂದಿದ್ದಾರೆ. ಶುಕ್ರವಾರ ಮಧ್ಯಾಹ್ನ ಪೊಲೀಸರು ಗಂಗ್ವಾರ್ ಮಹಿಳೆಯ ಶವವನ್ನು ಫೇಮಸ್​ ಆಗಿರುವ ಬೀಚ್ ಬಳಿ ಪತ್ತೆ ಮಾಡಿದ್ದಾರೆ. ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು, ಅವರು ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧಹೊಂದಿದ್ದರು, ಅವರಿಬ್ಬರ ನಡುವೆ ಈಕೆ ಅಡ್ಡಬರುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಗೌರವ್ ತನ್ನ ಪತ್ನಿಯನ್ನು ದಕ್ಷಿಣ ಗೋವಾದ ಕಡಲತೀರಕ್ಕೆ ವಿಹಾರಕ್ಕೆ ಕರೆದೊಯ್ದನು, ಅಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ. ಈ ಘಟನೆ ಶುಕ್ರವಾರ ಮಧ್ಯಾಹ್ನ 3.45 ರ ಸುಮಾರಿಗೆ ಕಾಬೋ ಡಿ ರಾಮಾ ಬೀಚ್‌ನಲ್ಲಿ ಸಂಭವಿಸಿದೆ. ಆತ ಏಕಾಂಗಿಯಾಗಿ ಬೀಚ್​ನಿಂದ ಬರುತ್ತಿರುವುದನ್ನು ಕಂಡ ಕೆಲ ಪ್ರವಾಸಿಗರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisement

ಮಹಿಳೆಯ ದೇಹದಲ್ಲಿ ಗಾಯದ ಗುರುತುಗಳಿವೆ. ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Tags :
BreakingNewsGOALatestNewsNewsKannadaಅಪಘಾತ
Advertisement
Next Article