ಅನೈತಿಕ ಸಂಬಂಧ ವಿಚಾರ: ಚಾಕುವಿನಿಂದ ಇರಿದು ಕೊಂದ ವ್ಯಕ್ತಿ
ಅನೈತಿಕ ಸಂಬಂಧ ವಿಚಾರಕ್ಕೆ ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ನಲ್ಲಿ ನಡೆದಿದೆ.
09:19 AM Dec 11, 2023 IST
|
Ashika S
ಬೆಂಗಳೂರು: ಅನೈತಿಕ ಸಂಬಂಧ ವಿಚಾರಕ್ಕೆ ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ನಲ್ಲಿ ನಡೆದಿದೆ.
Advertisement
ಪರ್ವಿನ್ ತಾಜ್ ಕೊಲೆಯಾದ ಮಹಿಳೆ. ಆರೋಪಿ ಜುನೈದ್ ಹಾಗೂ ಮೃತ ಮಹಿಳೆ ಇಬ್ಬರೂ ಸಂಬಂಧಿಗಳು. ಜುನೈದ್ ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ಕೆಲ ತಿಂಗಳುಗಳಿಂದ ಪತ್ನಿಯಿಂದ ದೂರವಾಗಿದ್ದ. ಪತ್ನಿ ದೂರವಾದ ಬಳಿಕ ಮಾನಸಿಕವಾಗಿ ನೊಂದಿದ್ದ ಜುನೈದ್ ಗೆ, ಸಂಬಂಧಿ ಪರ್ವಿನ್ ತಾಜ್ ಹತ್ತಿರವಾಗಿದ್ದಳು. ಆದರೆ ಏನಾಯ್ತೋ ಅವಳು ಕೂಡ ಜುನೈದ್ನನ್ನ ಅವೈಡ್ ಮಾಡುತ್ತಿದ್ದಳು. ಈ ವಿಚಾರಕ್ಕೆ ಜುನೈದ್ ಪರ್ವಿನ್ ತಾಜ್ ಜೊತೆಗೂ ಜಗಳ ಮಾಡಿಕೊಂಡಿದ್ದ
ವಿಚಾರಕ್ಕೆ ಪರ್ವಿನ್ ತಾಜ್ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ.
Advertisement
ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜುನೈದ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Advertisement
Next Article