ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸಚಿವರ ಪಿಎ ಎಂದು ಹೇಳಿಕೊಂಡು ಎಂಎಸ್ ಧೋನಿ ಮ್ಯಾನೇಜರ್‌ಗೆ ವಂಚನೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಿಎ ಎಂದು ಹೇಳಿಕೊಂಡು ಇಂಡಿಯಾ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಅವರ ಮ್ಯಾನೇಜರ್‌ಗೆ ವಂಚಿಸಿದ ಘಟನೆ ನಡೆದಿದ್ದು, ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
08:34 AM Feb 03, 2024 IST | Ashika S

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಿಎ ಎಂದು ಹೇಳಿಕೊಂಡು ಇಂಡಿಯಾ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಅವರ ಮ್ಯಾನೇಜರ್‌ಗೆ ವಂಚಿಸಿದ ಘಟನೆ ನಡೆದಿದ್ದು, ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ  ದೇವರ ಸ್ಪೆಷಲ್ ದರ್ಶನ ಮಾಡಿಸಿಕೊಡುತ್ತೇನೆ ಎಂದು ಹೇಳಿ ವಂಚಕನೊಬ್ಬ ಲಕ್ಷಾಂತರ ರೂಪಾಯಿ ವಂಚಿಸಿದ್ದಾನೆ.

ಎಂಎಸ್ ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಎಂಬವರಿಗೆ ಬರೋಬ್ಬರಿ ಆರುವರೆ ಲಕ್ಷ ರೂಪಾಯಿಗಳಷ್ಟು ವಂಚಿಸಲಾಗಿದೆ.

Advertisement

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ತಾನು, ತಾನು ಐಎಎಸ್ ಅಧಿಕಾರಿಯಾಗಿದ್ದು, ತಿರುಪತಿಯಲ್ಲಿ ಹನ್ನೆರಡು ಮಂದಿಗೆ ದೇವರ ವಿಶೇಷ ದರ್ಶನ ಮಾಡಿಸುತ್ತೇವೆ, ರೂಮ್ ವ್ಯವಸ್ಥೆ ಇರುತ್ತದೆ. ಪ್ರೋಟೋಕಾಲ್ ಮೂಲಕ ಯಾರನ್ನಾದ್ರೂ ಕಳಿಸುವ ಅಧಿಕಾರ ತನಗಿದೆ ಎಂದು ಒಬ್ಬಾತ ವಂಚಿಸಿದ್ದಾನೆ.

ಸ್ನೇಹಿತರ ಕುಟುಂಬವನ್ನು ಕಳಿಸುವ ನಿಟ್ಟಿನಲ್ಲಿ ಮೂರು ಲಕ್ಷ ರೂಪಾಯಿ ಹಣವನ್ನು ಧೋನಿ ಅವರ ಮ್ಯಾನೇಜರ್‌ ಸ್ವಾಮಿನಾಥನ್ ಅವರು ಪೋನ್ ಪೇ ಮಾಡಿದ್ದರು. ಸಾಯಿ ಟ್ರಸ್ಟ್ ಹೆಸರಿಗೆ ಮೂರು ಲಕ್ಷ ಹಣ ಪಡೆದಿರುವ ಆರೋಪವಿದೆ. ಹಣ ಪಡೆದು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸ್ವಾಮಿನಾಥನ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement
Tags :
LatetsNewsNewsKannadaಎಂಎಸ್ ಧೋನಿಕೇಂದ್ರ ಸಚಿವೆಕ್ರಿಕೆಟ್ ತಂಡನಿರ್ಮಲಾ ಸೀತಾರಾಮನ್‌ಪಿಎಂಮ್ಯಾನೇಜರ್​
Advertisement
Next Article