ಮಂಗಳೂರು: ಸಿಎಂ, ಡಿಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದನೆ - ಬಿಜೆಪಿ ಕಾರ್ಯಕರ್ತನ ಬಂಧನ
ಸಿಎಂ ಹಾಗೂ ಡಿಸಿಎಂ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
06:10 PM Dec 15, 2023 IST
|
Ramya Bolantoor
ಮಂಗಳೂರು: ಸಿಎಂ ಹಾಗೂ ಡಿಸಿಎಂ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
Advertisement
ಡಿ. 11 ರಂದು ಬಿಜೆಪಿ ಕಾರ್ಯಕರ್ತ ಸಂತೋಷ್ ಪೂಜಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶ್ರೀ ನಾರಾಯಣ ಗುರು ಯುವ ವೇದಿಕೆ ಎಂಬ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಾಯ್ಸ್ ಬಿಟ್ಟಿದ್ದು, ನಂತರ ಆ ವಾಯ್ಸ್ ಕ್ಲಿಪ್ ಗಳು ಇತರ ಗ್ರೂಪ್ ಗಳಲ್ಲೂ ವೈರಲ್ ಆಗಿತ್ತು.
ಈ ಬಗ್ಗೆ ಮುತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಎಂಬವರು ಡಿ.14ರಂದು ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಸಂತೋಷ್ ಬೋಳಿಯ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement
Next Article