For the best experience, open
https://m.newskannada.com
on your mobile browser.
Advertisement

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಶವ ಒಂದೂವರೆ ತಿಂಗಳ ಬಳಿಕ ಪತ್ತೆ

ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ.
06:39 PM Jan 28, 2024 IST | Ashika S
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಶವ ಒಂದೂವರೆ ತಿಂಗಳ ಬಳಿಕ ಪತ್ತೆ

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ.

Advertisement

ಚಿಕ್ಕಬಳ್ಳಾಪುರದ ಜಾತವಾರ ಹೊಸಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ನಂದಿ ಗಿರಿಧಾಮದ 38ನೇ ತಿರುವಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬ್ಯಾಗ್‍ನಲ್ಲಿ ಆಧಾರ್ ಕಾರ್ಡ್ ಲಭ್ಯವಾಗಿದ್ದರಿಂದ ಮೃತನ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಟ್ರ್ಯಾಕ್ಟರ್ ಚಾಲಕನಾಗಿದ್ದ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನೂ ಸಾಯುವುದಕ್ಕೂ ಮುನ್ನ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.

ಕಳೆದ ಡಿ.15ರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ತೊರೆದಿದ್ದ. ನಂತರ, 'ನಾನು ನಂದಿಬೆಟ್ಟದಲ್ಲಿದ್ದು ನನ್ನನ್ನ ಮರೆತುಬಿಡಿ, ನಾನು ವಿಷ ಸೇವಿಸಿ ಸಾಯುತ್ತಿದ್ದೇನೆ' ಎಂದು ಮನೆಯವರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದ.

ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಸಂಬಂಧಿಕರು ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು.  ಈತನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
Advertisement