ಮನುಸ್ಮೃತಿ. ಅಂಬೇಡ್ಕರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಅಂಬೇಡ್ಕರ್ ಮತ್ತು ಮನುಸ್ಮೃತಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ಮತ್ತು ಲಿಂಗತಾರತಮ್ಯವನ್ನು ಸಾರುವ ಅಲಿಖಿತ ಸಂವಿಧಾನ ಮನುಸ್ಮೃತಿಯನ್ನು ಸುಟ್ಟುಹಾಕಿದ್ದರು.
09:55 PM Dec 25, 2023 IST
|
Ashitha S
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಅಂಬೇಡ್ಕರ್ ಮತ್ತು ಮನುಸ್ಮೃತಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ಮತ್ತು ಲಿಂಗತಾರತಮ್ಯವನ್ನು ಸಾರುವ ಅಲಿಖಿತ ಸಂವಿಧಾನ ಮನುಸ್ಮೃತಿಯನ್ನು ಸುಟ್ಟುಹಾಕಿದ್ದರು.
Advertisement
ಇಂದು ನಾವೆಲ್ಲರೂ ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಆ ಮನುಸ್ಮೃತಿಯ ಪಳೆಯುಳಿಕೆಗಳನ್ನು ಸುಟ್ಟು ಹಾಕಬೇಕು. ಆ ಅಲಿಖಿತ ಸಂವಿಧಾನದ ನಾಶವಾಗದೆ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಅಸಾಧ್ಯ. ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
Advertisement
Advertisement
Next Article