ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಬಗ್ಗೆ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್ ಅವರು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
03:12 PM Jan 15, 2024 IST
|
Ashika S
ಬೆಂಗಳೂರು: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಬಗ್ಗೆ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್ ಅವರು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದರೆ.
ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡ ಅವರು ಉದ್ಘಾಟಿಸಿದ್ದರು.
Advertisement
ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ 2016 ರ ನವೆಂಬರ್ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಸಹ ಒಬ್ಬರು.
Advertisement
Next Article