For the best experience, open
https://m.newskannada.com
on your mobile browser.
Advertisement

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯ ಸಿಂಚನ ಆರಂಭಗೊಂಡಿದ್ದು, ಇಂದು ಮುಂಜಾನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ನಿದ್ದೆಯಿಂದ ಏಳೋ ಮುನ್ನವೇ ಭರ್ಜರಿ ಮಳೆಯಾಗಿದೆ.
07:33 AM May 08, 2024 IST | Nisarga K
ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ   ಹವಮಾನ ಇಲಾಖೆ ಎಚ್ಚರ
ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ಬೆಂಗಳೂರು: ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯ ಸಿಂಚನ ಆರಂಭಗೊಂಡಿದ್ದು, ಇಂದು ಮುಂಜಾನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ನಿದ್ದೆಯಿಂದ ಏಳೋ ಮುನ್ನವೇ ಭರ್ಜರಿ ಮಳೆಯಾಗಿದೆ.

Advertisement

ಕರ್ನಾಟಕ ಸೇರಿದಂತೆ ದೇಶದ ಯಾವ್ಯಾವ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ? ಯಾವ ರಾಜ್ಯಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ ಅನ್ನೋ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯ ವರದಿ ಆಧರಿಸಿ ಇಲ್ಲಿ ಕೊಡಲಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅನ್ನೋದು ಸಂತಸದ ಸಂಗತಿ.

ಹವಾಮಾನ ಸಂಬಂಧಿತ ಮಾಹಿತಿಯನ್ನು ಒದಗಿಸುವ ವೆಬ್‌ಸೈಟ್ ಸ್ಕೈಮೆಟ್ ವೆದರ್ ಪ್ರಕಾರ, ಇಂದು ಅಂದರೆ ಮೇ 8 ರಂದು, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಇಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

Advertisement

Advertisement
Tags :
Advertisement