ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
10:15 PM May 13, 2024 IST | Ashika S

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

ಮೈಸೂರು ಮೂಲದ ಮಹಿಳೆ ಕಿಡ್ನ್ಯಾಪ್ ಮಾಡಿರೋ ಆರೋಪ ಪ್ರಕರಣದಲ್ಲಿ ಹೆಚ್‌.ಡಿ ರೇವಣ್ಣ ಅವರು ಕಳೆದ ಆರು ದಿನಗಳಿಂದ ಜೈಲಲ್ಲಿದ್ದರು.

09ರಂದು ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ನಾಳೆ ನ್ಯಾಯಾಂಗ ಬಂಧನ ಅವಧಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಹೆಚ್‌.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೀತು.

Advertisement

ಇವತ್ತು ಇಡೀ ದಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪೀಠ ಮಾಜಿ ಸಚಿವ ಹೆಚ್.​ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಷರತ್ತು ಬದ್ಧ ಜಾಮೀನಿನಲ್ಲಿ ಪರ್ಸನಲ್ ಬಾಂಡ್ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ದೇಶ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.

Advertisement
Tags :
BAILconditional bailHD RevannaLatetsNewsNewsKarnataka
Advertisement
Next Article