ಪ್ರೀತಿಗೆ ಪೋಷಕರ ವಿರೋಧ: ಅಪ್ರಾಪ್ತ ಯುವತಿಯ ಆತ್ಮಹತ್ಯೆ
ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
08:47 AM Feb 09, 2024 IST
|
Ashika S
ರಾಯಚೂರು: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
Advertisement
ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ.
ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು.
Advertisement
ಮನನೊಂದು ಮನೆಯಲ್ಲಿದ್ದ ಸೀರೆಯಿಂದ ನೇಣುಬಿಗಿದುಕೊಂಡು ಸಂಗೀತಾ ಸಾವಿಗೆ ಶರಣಾಗಿದ್ದಾಳೆ.
ಈಕೆಯ ಮೃತದೇಹವನ್ನು ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪ್ರಾಪ್ತೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821
Advertisement
Next Article