For the best experience, open
https://m.newskannada.com
on your mobile browser.
Advertisement

ಕಾಂಗ್ರೆಸ್ ಸರ್ಕಾರದ ಆಡಳಿತ ವಿರೋಧಿಸಿ ಬಿಜೆಪಿಯಿಂದ ಮಾನವ ಸರಪಳಿ

ರಾಜ್ಯ ಕಾಂಗ್ರೆಸ್ ಆಡಳಿತ ವಿರೋಧಿ ನೀತಿಯನ್ನು ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದೆ.
11:19 AM Apr 25, 2024 IST | Ashitha S
ಕಾಂಗ್ರೆಸ್ ಸರ್ಕಾರದ ಆಡಳಿತ ವಿರೋಧಿಸಿ ಬಿಜೆಪಿಯಿಂದ ಮಾನವ ಸರಪಳಿ

ಮಂಗಳೂರು: ರಾಜ್ಯ ಕಾಂಗ್ರೆಸ್ ಆಡಳಿತ ವಿರೋಧಿ ನೀತಿಯನ್ನು ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದೆ.

Advertisement

ಮಾನವ ಸರಪಣಿ ಪ್ರತಿಭಟನೆ ಉದ್ದಕ್ಕೂ "ಡೇಂಜರ್... ಕಾಂಗ್ರೆಸ್ ಡೇಂಜರ್...!, ಪಿಕ್ ಪಾಕೆಟ್.. ಕಾಂಗ್ರೆಸ್ ಪಿಕ್ ಪಾಕೆಟ್....!" ಎಂಬ ಘೋಷಣೆ ತಾರಕ ಸ್ವರದಲ್ಲಿ ಕೇಳಿ ಬಂದಿತ್ತು. ನಗರದ ಹಂಪನಕಟ್ಟೆಯ ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿ ರಚನೆ ಮಾಡಿ ಪ್ರತಿಭಟನೆ ನಡೆಯಿತು.
Bjp

ಪ್ರತಿಭಟನೆಯ ಜವಾಬ್ದಾರಿ ವಹಿಸಿರುವ ಶಾಸಕ ವೇದವ್ಯಾಸ ಕಾಮತ್ ಅವರು ಪ್ರತಿಭಟನೆ ಉದ್ದಕ್ಕೂ ಕಾಂಗ್ರೆಸ್ ಡೇಂಜರ್, ಕಾಂಗ್ರೆಸ್ ಪಿಕ್ ಪಾಕೆಟ್ ಎಂಬ ಘೋಷಣೆ ಕೂಗಿದ್ದರು. ಈ ವೇಳೆ ದ.ಕ.ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಬಿಜೆಪಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದಾರೆ.

Advertisement

Advertisement
Tags :
Advertisement