ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್ ಸರ್ಕಾರದ ಆಡಳಿತ ವಿರೋಧಿಸಿ ಬಿಜೆಪಿಯಿಂದ ಮಾನವ ಸರಪಳಿ

ರಾಜ್ಯ ಕಾಂಗ್ರೆಸ್ ಆಡಳಿತ ವಿರೋಧಿ ನೀತಿಯನ್ನು ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದೆ.
11:19 AM Apr 25, 2024 IST | Ashitha S

ಮಂಗಳೂರು: ರಾಜ್ಯ ಕಾಂಗ್ರೆಸ್ ಆಡಳಿತ ವಿರೋಧಿ ನೀತಿಯನ್ನು ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದೆ.

Advertisement

ಮಾನವ ಸರಪಣಿ ಪ್ರತಿಭಟನೆ ಉದ್ದಕ್ಕೂ "ಡೇಂಜರ್... ಕಾಂಗ್ರೆಸ್ ಡೇಂಜರ್...!, ಪಿಕ್ ಪಾಕೆಟ್.. ಕಾಂಗ್ರೆಸ್ ಪಿಕ್ ಪಾಕೆಟ್....!" ಎಂಬ ಘೋಷಣೆ ತಾರಕ ಸ್ವರದಲ್ಲಿ ಕೇಳಿ ಬಂದಿತ್ತು. ನಗರದ ಹಂಪನಕಟ್ಟೆಯ ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿ ರಚನೆ ಮಾಡಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಜವಾಬ್ದಾರಿ ವಹಿಸಿರುವ ಶಾಸಕ ವೇದವ್ಯಾಸ ಕಾಮತ್ ಅವರು ಪ್ರತಿಭಟನೆ ಉದ್ದಕ್ಕೂ ಕಾಂಗ್ರೆಸ್ ಡೇಂಜರ್, ಕಾಂಗ್ರೆಸ್ ಪಿಕ್ ಪಾಕೆಟ್ ಎಂಬ ಘೋಷಣೆ ಕೂಗಿದ್ದರು. ಈ ವೇಳೆ ದ.ಕ.ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಬಿಜೆಪಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದಾರೆ.

Advertisement

Advertisement
Tags :
BJPCongressGOVERNMENTindiaKARNATAKANewsKarnatakaಮಂಗಳೂರು
Advertisement
Next Article