ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಡಲನಗರಿ ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮೈಸೂರಿನಲ್ಲಿ ಸಮಾವೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿದ್ದಾರೆ.
07:34 PM Apr 14, 2024 IST | Ashitha S

ಮಂಗಳೂರು: ಮೈಸೂರಿನಲ್ಲಿ ಸಮಾವೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿದ್ದಾರೆ.

Advertisement

ಮಂಗಳೂರು ಏರ್‌ಪೋರ್ಟ್ಗೆ ಬಂದಿಳಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ಮೊದಲ ಬಾರಿಗೆ ಪ್ರಧಾನಿಯವರು ರೋಡ್‌ ಶೋ ನಡೆಸುತ್ತಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಆರಂಭವಾಗಲಿರುವ ರೋಡ್‌ ಶೋ ನವಭಾರತ ವೃತ್ತದವರೆಗೆ ನಡೆಯಲಿದೆ. ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಜನಸಾಗರವೇ ನೆರೆದಿದೆ.

ಇನ್ನು ರೋಡ್ ಶೋನಲ್ಲಿ ಮೋದಿ ಜತೆ ಇಬ್ಬರು ಅಭ್ಯರ್ಥಿಗಳು ಮಾತ್ರ ಭಾಗಿ ಆಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಲಿದ್ದಾರೆ. ಕಟೀಲು ಹೆಸರನ್ನೂ ಸಹ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಳುಹಿಸಿತ್ತು. ಆದರೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಮಾತ್ರ ಪಿಎಂ ಕಚೇರಿ ಅಂತಿಮಗೊಳಿಸಿದೆ.

Advertisement

Advertisement
Tags :
BJPCongressGOVERNMENTindiaKARNATAKALatestNewsNewsKarnatakaಪ್ರಧಾನಿ ನರೇಂದ್ರ ಮೋದಿಬೆಂಗಳೂರುಮಂಗಳೂರು
Advertisement
Next Article