ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ ನಜೀಮ್: ಯುವಕನ ಸಾಧನೆಗೆ ಪ್ರಧಾನಿ ಮೆಚ್ಚುಗೆ

ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿಕಸಿತ ಭಾರತ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಿದ್ದಾರೆ.
04:32 PM Mar 07, 2024 IST | Ashitha S

ಕಾಶ್ಮೀರ: ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿಕಸಿತ ಭಾರತ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಿದ್ದಾರೆ.

Advertisement

ಈ ವೇಳೆ ಯುವಕನೊಬ್ಬ ಕಾರ್ಯಕ್ರಮದ ನಡುವಿನಲ್ಲಿ ಪ್ರಧಾನಿ ಮೋದಿಗೆ ಸೆಲ್ಫಿ ಮನವಿ ಮಾಡಿದ್ದಾನೆ. ಯುವಕನ ಮನವಿ ಸ್ವೀಕರಿಸಿದ ಮೋದಿ, ಕಾರ್ಯಕ್ರಮ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ಈ ಸೆಲ್ಫಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮೋದಿ, ನನ್ನ ಕಾಶ್ಮೀರ ಸ್ನೇಹಿತ ನಜೀಮ್ ಎಂದು ಬರೆದಿದ್ದಾರೆ.

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಫಲಾನುಭಿಗಳ ಜೊತೆ ಮೋದಿ ಸಂವಾದ ನಡೆಸಿದ್ದಾರೆ. ಇದೇ ವೇಳೆ 64,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

Advertisement

ವಿಕಸಿತ ಭಾರತ ಯೋಜನಯಡಿಯಲ್ಲಿ ಸರ್ಕಾರದ ಸೌಲಭ್ಯ ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಿದ ನಜೀಮ್ ನಜೀರ್ ಇಂದು ಪ್ರಧಾನಿ ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ದೇಶಾದ್ಯಂತ ಸುದ್ದಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಜೀಮ್, ನಿಮ್ಮ(ಮೋದಿ) ಜೊತೆ ಸೆಲ್ಫಿ ಬೇಕು ಎಂದು ಮನವಿ ಮಾಡಿದ್ದಾನೆ. ವಿಕಸಿತ ಭಾರತ ಫಲಾನುಭವಿಯ ಸಾಧನೆ ಮೆಚ್ಚಿದ ಮೋದಿ, ಕಾರ್ಯಕ್ರಮದ ಬಳಿಕ ಸೆಲ್ಫಿ ನೀಡುವುದಾಗಿ ಹೇಳಿದ್ದಾರೆ. ಇದರಂತೆ ಕಾರ್ಯಕ್ರಮದ ಬಳಿಕ ನಜೀಮ್ ಜೊತೆ ಮೋದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಕುರಿತು ಸಂತಸ ಹಂಚಿಕೊಂಡ ಮೋದಿ, ಕಾಶ್ಮೀರದ ನನ್ನ ಸ್ನೇಹಿತ ನಜೀಮ್ ಜೊತೆಗಿನ ಸೆಲ್ಫಿ ಯಾವತ್ತೂ ನೆನಪಿನಲ್ಲಿ ಉಳಿಯಲಿದೆ. ನಜೀಮ್ ಸಾಧನೆ ನನ್ನ ಸಂಭ್ರಮ ಇಮ್ಮಡಿಗೊಳಿಸಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ನಜೀಮ್ ಸೆಲ್ಫಿಗೆ ಮನವಿ ಮಾಡಿದ್ದ. ನಜೀಮ್ ಜೊತೆ ಸೆಲ್ಫಿ ತೆಗೆದಿದ್ದೇನೆ. ನಜೀಮ್ ಮುಂದಿನ ಜೀವನಕ್ಕೆ ಯಶಸ್ಸು ಕೋರುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನಜೀಮ್ 2018ರಲ್ಲಿ ಜೇನು ನೋಣಗಳನ್ನು ಸಾಕಿ ಜೇನು ವಹಿವಾಟು ಆರಂಬಿಸಿದ್ದ. 10ನೇ ತರಗತಿಯಲ್ಲಿರುವಾಗ ಜೇನು ಕೃಷಿ ಆರಂಭಗೊಂಡಿತು. ಮನೆಯ ಮಹಡಿ ಮೇಲೆ ಜೇನು ಬಾಕ್ಸ್ ಇರಿಸಿ ಜೇನು ತೆಗೆಯಲು ಮುಂದಾದ. 2019ರಲ್ಲಿ ಸರ್ಕಾರದ ಯೋಜನೆಯಡಿಯಲ್ಲಿ 25 ಜೇನು ಬಾಕ್ಸ್ ಖರೀದಿಸಲಾಯಿತು. ಇದಕ್ಕೆ ಶೇಕಡಾ 50 ರಷ್ಟು ಸಬ್ಸಿಡಿ ಸಿಕ್ಕಿತ್ತು. 25 ಬಾಕ್ಸ್ ಜೇನು ಗೂಡಿನಿಂದ 75 ಕೆಜಿ ಜೇನು ತೆಗೆದು 60,000 ರೂಪಾಯಿ ಆದಾಯ ಗಳಿಸಿದ್ದು. 2020ರಲ್ಲಿ ಪ್ರಧಾನ ಮಂತ್ರಿ PMEGP ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದು 200 ಬಾಕ್ಸ್ ಖರೀದಿಸಿದ್ದಾರೆ. ಇದೀಗ ಸುಸಜ್ಜಿತ ಜೇನು ಕೃಷಿ ನಡೆಸುತ್ತಾ ಭರ್ಜರಿ ಆದಾಯಗಳಿಸುತ್ತಿದ್ದಾರೆ.  ಇದನ್ನು ಪ್ರಧಾನಿ ಮೋದಿ ಅವರು ಮೆಚ್ಚಿ ಶುಭಾ ಹಾರೈಸಿದ್ದಾರೆ.

Advertisement
Tags :
indiaKARNATAKALatestNewsNewsKannadaನಜೀಮ್ನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರುಮೋದಿ
Advertisement
Next Article