ಮತ್ತೊಂದು ಹಿಂದೂ ದೇಗುಲ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ನವದೆಹಲಿ: ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಬಿಎಪಿಎಸ್ ಹಿಂದೂ ಮಂದಿರವನ್ನು ಪ್ರಧಾನಿ ಮೋದಿ ಅವರು ಫೆಬ್ರವರಿ 14ರಂದು ಉದ್ಗಾಟಿಸಲಿದ್ದಾರೆ. ಸ್ವಾಮಿ ಈಶ್ವರಚರಣದಾಸ್ ಮತ್ತು ಸ್ವಾಮಿ ಬ್ರಹ್ಮವಿಹರಿದಾಸ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ನೀಡಿದ ಆಮಂತ್ರಣವನ್ನು ಪ್ರಧಾನಿ ಮೋದಿ ಅವರು ಸ್ವೀಕರಿಸಿದ್ದಾರೆ ಎಂದು ಬಿಎಪಿಎಸ್ ಸ್ವಾಮಿನಾರಾಯಣ್ ಸಂಸ್ಥಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿ ಮತ್ತು ಬಿಎಪಿಎಸ್ ಸ್ವಾಮಿ ಈಶ್ವರಚರಣದಾಸ್ ಅವರು ಬುಧವಾರ ಪ್ರಧಾನಮಂತ್ರಿ ನಿವಾಸದ ಕಚೇರಿಯಲ್ಲಿ ಭೇಟಿಯಾದರು ಮತ್ತು ಪ್ರಧಾನಿ ಮೋದಿ ಅವರು ಆಹ್ವಾನವನ್ನು ಸ್ವೀಕರಿಸಿದರು, ಐತಿಹಾಸಿಕ ಮತ್ತು ಸಾಂಪ್ರದಾಯಿಕ ದೇವಾಲಯಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಸ್ವಾಮಿ ಈಶ್ವರಚರಣದಾಸ್ ಅವರು ಪ್ರಧಾನಿಯವರಿಗೆ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ಸನ್ಮಾನಿಸಿದರು. ನಮ್ಮ ರಾಷ್ಟ್ರ ಮತ್ತು ಜಗತ್ತಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಶ್ಲಾಘಿಸಿದರು. ಭಾರತದಾದ್ಯಂತ ಯಾತ್ರಾ ಸ್ಥಳಗಳ ಗಮನಾರ್ಹ ನವೀಕರಣ ಮತ್ತು ಅಭಿವೃದ್ಧಿಗಾಗಿ ಪ್ರಧಾನಮಂತ್ರಿಯವರನ್ನು ವಿಶೇಷವಾಗಿ ಶ್ಲಾಘಿಸಿದರು, ಇದು ಇತ್ತೀಚಿನ ಶತಮಾನಗಳಲ್ಲಿ ಸಾಟಿಯಿಲ್ಲದ ಸಾಧನೆಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.